Earthquake: ಇತ್ತ ಪ್ರವಾಹದ ಭೀತಿ, ಅತ್ತ ಭೂಕಂಪನ ಅನುಭವ! ವಿಜಯಪುರ, ಬಾಗಲಕೋಟೆಯಲ್ಲಿ ಆತಂಕ ವಿಜಯಪುರದಲ್ಲಿ ಬೆಳ್ಳಂಬೆಳಗ್ಗೆ ಭೂಮಿ ಕಂಪಿಸಿದೆ. ಅತ್ತ ಬಾಗಲಕೋಟೆ (Bagalkot) ಜಿಲ್ಲೆಯ ಜಮಖಂಡಿ (Jamakhandi) ತಾಲೂಕಿನ ತುಬುಚಿ ಸೇರಿದಂತೆ ಹಲವು ಗ್ರಾಮಗಳಲ್ಲಿ 2 ಸೆಕೆಂಡುಗಳ ಕಾಲ ಭೂಮಿ ಕಂಪಿಸಿದೆ.


 ಬಾಗಲಕೋಟೆ: ಬೆಳ್ಳಂಬೆಳಗ್ಗೆ (Early Morning) ರಾಜ್ಯದ ಎರಡು ಜಿಲ್ಲೆಗಳಲ್ಲಿ ಭೂಮಿ ಕಂಪಿಸಿದ (Earth Quake) ಅನುಭವವಾಗಿದೆ. ವಿಜಯಪುರ (Vijayapur) ಜಿಲ್ಲೆಯ ವಿಜಯಪುರ ನಗರ ಹಾಗೂ ತಿಕೋಟ (Tikota) ತಾಲೂಕಿನಲ್ಲಿ ಇಂದು ಮುಂಜಾನೆ ಎರಡು ಬಾರಿ ಭೂಮಿ ಕಂಪಿಸಿದೆ. ಜೊತೆಗೆ ಬಾಗಲಕೋಟೆ (Bagalkot) ಜಿಲ್ಲೆಯ ಜಮಖಂಡಿ (Jamakhandi) ತಾಲೂಕಿನ ತುಬುಚಿ ಸೇರಿದಂತೆ ಹಲವು ಗ್ರಾಮಗಳಲ್ಲಿ 2 ಸೆಕೆಂಡುಗಳ ಕಾಲ ಭೂಮಿ ಕಂಪಿಸಿದೆ. ಜಮಖಂಡಿ ತಾಲೂಕಿನ ತುಬುಚಿ, ಶೂರ್ಪಲ್ಲಿ, ಜಂಬಗಿ, ಟಕ್ಕೊಡ, ಟಕ್ಕಳಕಿ ಸೇರಿದಂತೆ ಹಲವು ಗ್ರಾಮಗಳಲ್ಲಿ ಭೂಮಿ ಕಂಪನವಾಗಿದೆ. ಅತ್ತ ಮಹಾರಾಷ್ಟ್ರದ ಗಡಿ ಭಾಗದಲ್ಲಿ ಕಂಪನದ ಕೇಂದ್ರ ಬಿಂದು ಇರುವುದು ಗೊತ್ತಾಗಿದೆ. ಇನ್ನು ಇತ್ತ ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆಯಿಂದ ಪ್ರವಾಹ (Flood) ಭೀತಿ ಎದುರಾಗಿದೆ. ಅತ್ತ ಉತ್ತರ ಕರ್ನಾಟಕ ಭಾಗದಲ್ಲಿ ಭೂಕಂಪನ ಉಂಟಾಗಿದೆ. ಹೀಗಾಗಿ ರಾಜ್ಯದ ಜನರು ಆತಂಕಕ್ಕೆ ಒಳಗಾಗಿದ್ದಾರೆ. 

Post a Comment

Previous Post Next Post