Karnataka Lokayukta: ಭ್ರಷ್ಟರಿಗೆ ಸಿಂಹಸ್ವಪ್ನವೇ ಲೋಕಾಯುಕ್ತ? ಇಲ್ಲಿ ನೊಂದವರಿಗೆ ಸಿಗುತ್ತಾ ನ್ಯಾಯ?


 ಕರ್ನಾಟಕ ಲೋಕಾಯುಕ್ತ

ಭ್ರಷ್ಟರಿಗೆ ಸಿಂಹಸ್ವಪ್ನವಾಗಿದ್ದ ಲೋಕಾಯುಕ್ತವನ್ನು 2016ರಲ್ಲಿ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಲೋಕಾಯುಕ್ತದ ಅಧಿಕಾರ ಮೊಟಕುಗೊಳಿಸಿ, ಎಸಿಬಿ ರಚಿಸಲಾಗಿತ್ತು. ಆದರೆ 2022ರಲ್ಲಿ ಬಳಿಕ ಸೊರಗಿ ಹೋಗಿದ್ದ ಲೋಕಾಯುಕ್ತಕ್ಕೆ ಸರ್ಕಾರದ ಆದೇಶವನ್ನು ಹೈಕೋರ್ಟ್ ರದ್ದು ಪಡಿಸಿತ್ತು. ಇದೀಗ ಮೈಕೊಡವಿ ಎದ್ದಿರುವ ಲೋಕಾಯುಕ್ತ, ಭರ್ಜರಿ ಬೇಟೆಯಾಡಿದೆ. ಹಾಗಾದ್ರೆ ಏನಿದು ಲೋಕಾಯುಕ್ತ? ಇದರ ಅಧಿಕಾರ ವ್ಯಾಪ್ತಿ ಏನು? ಇದು ಭ್ರಷ್ಟರಿಗೆ ಸಿಂಹಸ್ವಪ್ನ, ನೊಂದವರಿಗೆ ನ್ಯಾಯ ಕೊಡಿಸುವ ಸಂಸ್ಥೆಯೇ? ಈ ಬಗ್ಗೆ ಇಲ್ಲಿದೆ ಮಾಹಿತಿ ಮತ್ತೆ ಕರ್ನಾಟಕ ಲೋಕಾಯುಕ್ತ (Karnataka Lokayukta) ಅಬ್ಬರಿಸುತ್ತಿದೆ. ಭ್ರಷ್ಟರಿಗೆ ಸಿಂಹಸ್ವಪ್ನವಾಗಿದ್ದ ಲೋಕಾಯುಕ್ತವನ್ನು 2016ರಲ್ಲಿ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಲೋಕಾಯುಕ್ತದ ಅಧಿಕಾರ ಮೊಟಕುಗೊಳಿಸಿ, ಎಸಿಬಿ (Anti-Corruption Bureau). ಇದಾದ ಮೇಲೆ ಲೋಕಾಯುಕ್ತ ಪೊಲೀಸ್ ಠಾಣೆ ಸ್ಥಾನಮಾನ ತೆಗೆದು ಎಸಿಬಿ ರಚಿಸಿದ್ದ ಅಂದಿನ  ಸಿದ್ದರಾಮಯ್ಯ (Siddaramaiah) ಸರ್ಕಾರದ ಆದೇಶವನ್ನು ಕಳೆದ ಆಗಷ್ಟ್‌ನಲ್ಲಿ ಹೈಕೋರ್ಟ್ (High Court) ರದ್ದುಪಡಿಸಿತ್ತು. ಇಷ್ಟೆಲ್ಲಾ ಆದ ಬಳಿಕ ಮತ್ತೆ ಲೋಕಾಯುಕ್ತ ಆರ್ಭಟಿಸೋಕೆ ಶುರು ಮಾಡಿದೆ. ನಿನ್ನೆ ಚನ್ನಗಿರಿ ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ (Madalu Virupakshappa) ಪುತ್ರ ಮಾಡಾಳು ಪ್ರಶಾಂತ್‌ನ (Madalu Prashant) ಭ್ರಷ್ಟಾಚಾರವನ್ನು ಬಯಲು ಮಾಡಿದ್ದೇ ಇದಕ್ಕೆ ಸಾಕ್ಷಿ! ಹಾಗಾದ್ರೆ ಏನಿದು ಲೋಕಾಯುಕ್ತ? ಇದರ ಅಧಿಕಾರ ವ್ಯಾಪ್ತಿ ಏನು? ಇದು ಭ್ರಷ್ಟರಿಗೆ ಸಿಂಹಸ್ವಪ್ನ, ನೊಂದವರಿಗೆ ನ್ಯಾಯ ಕೊಡಿಸುವ ಸಂಸ್ಥೆಯೇ? ಈ ಬಗ್ಗೆ ಇಲ್ಲಿದೆ ಮಾಹಿತಿ…ಏನಿದು ಲೋಕಾಯುಕ್ತಲೋಕಾಯುಕ್ತವು ರಾಜ್ಯ ಮಟ್ಟದ ಭ್ರಷ್ಟಾಚಾರ-ವಿರೋಧಿ ಒಂಬುಡ್ಸ್‌ಮನ್ ಸಂಸ್ಥೆಯಾಗಿದೆ, ಅಂದರೆ ಅದು ಪ್ರತಿ ರಾಜ್ಯದಲ್ಲಿ ಸ್ವತಂತ್ರವಾಗಿ ಕಾರ್ಯನಿರ್ವಹಿಸುತ್ತದೆ ಮತ್ತು ತನ್ನದೇ ಆದ ಅಧಿಕಾರಗಳು, ನ್ಯಾಯವ್ಯಾಪ್ತಿ ಮತ್ತು ಕಾರ್ಯವಿಧಾನಗಳನ್ನು ಹೊಂದಿದೆ ಎಂಬುದು ಗಮನಿಸಬೇಕಾದ ಸಂಗತಿ. ಆದ್ದರಿಂದ, ಲೋಕಾಯುಕ್ತವು ಅನೇಕ ರಾಜ್ಯಗಳಲ್ಲಿ ಅಸ್ತಿತ್ವದಲ್ಲಿರಬಹುದು, ಅದರ ಅಧಿಕಾರಗಳು ಮತ್ತು ಕಾರ್ಯಗಳು ರಾಜ್ಯದಿಂದ ರಾಜ್ಯಕ್ಕೆ ಬದಲಾಗಬಹುಲೋಕಾಯುಕ್ತರು ಎಲ್ಲೆಲ್ಲಿ ಇದ್ದಾ ಲೋಕಾಯುಕ್ತ ಸಂಸ್ಥೆಯು ಕರ್ನಾಟಕ, ಉತ್ತರ ಪ್ರದೇಶ, ಮಧ್ಯಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನ ಮತ್ತು ಇತರವುಗಳನ್ನು ಒಳಗೊಂಡಂತೆ ಭಾರತದ ಬಹು ರಾಜ್ಯಗಳಲ್ಲಿ ಅಸ್ತಿತ್ವದಲ್ಲಿದೆಕರ್ನಾಟಕ ಲೋಕಾಯು ಕರ್ನಾಟಕ ಲೋಕಾಯುಕ್ತವು ಭಾರತದ ಕರ್ನಾಟಕ ರಾಜ್ಯದಲ್ಲಿ ಸ್ಥಾಪಿಸಲಾದ ಭ್ರಷ್ಟಾಚಾರ-ವಿರೋಧಿ ಒಂಬುಡ್ಸ್‌ಮನ್ ಸಂಸ್ಥೆಯಾಗಿದೆ. ಚುನಾಯಿತ ಪ್ರತಿನಿಧಿಗಳು, ಸರ್ಕಾರಿ ನೌಕರರು ಮತ್ತು ಶಾಸನಬದ್ಧ ಸಂಸ್ಥೆಗಳ ಸದಸ್ಯರು ಸೇರಿದಂತೆ ಸಾರ್ವಜನಿಕ ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ಮತ್ತು ದುರಾಡಳಿತದ ದೂರುಗಳನ್ನು ತನಿಖೆ ಮಾಡುವ ಉದ್ದೇಶದಿಂದ ಇದನ್ನು ಕರ್ನಾಟಕ ಲೋಕಾಯುಕ್ತ ಕಾಯಿದೆ 1984ರ ಅಡಿಯಲ್ಲಿ 1986ರಲ್ಲಿ ಸ್ಥಾಪಿಸಲಾಯಿತು2015ರಲ್ಲಿ ಲೋಕಾಯುಕ್ತಕ್ಕೆ ತಿದ್ದುಈ ಕಾಯ್ದೆಯನ್ನು 2015ರಲ್ಲಿ ತಿದ್ದುಪಡಿ ಮಾಡಲಾಗಿದ್ದು, ಅದರ ಪ್ರಕಾರ ಹತ್ತು ವರ್ಷಗಳ ಅವಧಿಗೆ ಹೈಕೋರ್ಟ್‌ನ ನ್ಯಾಯಾಧೀಶ ಹುದ್ದೆಯನ್ನು ಅಲಂಕರಿಸಿದ ಯಾವುದೇ ವ್ಯಕ್ತಿಯನ್ನು ಲೋಕಾಯುಕ್ತ ಮತ್ತು ಐದು ವರ್ಷ ಉಪ ಲೋಕಾಯುಕ್ತನನ್ನಾಗಿ ನೇಮಿಸಬಹುಇದನ್ನೂ ಓದಿ: ACB vs Lokayukta: ಎಸಿಬಿಯನ್ನೇ ರದ್ದು ಮಾಡಿದ್ದೇಕೆ ಹೈಕೋರ್ಟ್? ಲೋಕಾಯುಕ್ತಕ್ಕೆ ಬರುತ್ತಾ ಮತ್ತಷ್ಟು ಲೋಕಾಯುಕ್ತರ ನೇಮಕ ಹೇಲೋಕಾಯುಕ್ತವು ಸುಪ್ರೀಂ ಕೋರ್ಟ್ ಅಥವಾ ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶರ ನೇತೃತ್ವದ ಸ್ವತಂತ್ರ ಸಂಸ್ಥೆಯಾಗಿದ್ದು, ಕರ್ನಾಟಕ ರಾಜ್ಯಪಾಲರು ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಮತ್ತು ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ನಾಯಕರೊಂದಿಗೆ ಸಮಾಲೋಚಿಸಿ ನೇಮಕ ಮಾಡುತ್ತಾಕರ್ನಾಟಕದ ಲೋಕಾಯುಕ್ತಕರ್ನಾಟಕದ ಮೊದಲ ಲೋಕಾಯುಕ್ತರಾದವರು ಏ.ಡಿ. ಕೋಶಲ್. ಅವರು ಜನವರಿ 1986ರಿಂದ 1991ರವರೆಗೆ ಅಧಿಕಾರದಲ್ಲಿದ್ದರು. ಬಳಿಕ ರವೀಂದ್ರನಾಥ ಪೈ, ಅಬ್ದುಲ್ ಹಕೀಮ್ ಅವರು ಅಧಿಕಾರಕ್ಕೆ ಬಂದರು. ಇದಾದ ಮೇಲೆ ಲೋಕಾಯುಕ್ತಕ್ಕೆ ಘನತೆ ತಂದುಕೊಟ್ಟ ಕೀರ್ತಿ ಎನ್. ವೆಂಕಟಾಚಲ ಅವರಿಗೆ ಸಲ್ಲುತ್ತದೆ. ಅವರು ಜುಲೈ 2, 2001ರಿಂದ 2006ರವರೆಗೆ ಅಧಿಕಾರದಲ್ಲಿದ್ದರು. ಅವರ ಬಳಿಕ ಅಧಿಕಾರಕ್ಕೆ ಬಂದ ಸಂತೋಷ್ ಹೆಗ್ಡೆ ಲೋಕಾಯುಕ್ತದ ಹೆಸರನ್ನು ಮತ್ತಷ್ಟು ಪ್ರಖ್ಯಾತಿಗೊಳಿಸಿದರು. ಅವರು ಆಗಸ್ಟ್ 3, 2006ರಿಂದ 2 ಆಗಸ್ಟ್ 2011ರವರೆಗೆ ಅಧಿಕಾರದಲ್ಲಿದ್ದರು. ಬಳಿಕ ಶಿವರಾಜ್ ಪಾಟೀಲ್, ವೈ.ಭಾಸ್ಕರ್ ರಾವ್, ಪಿ. ವಿಶ್ವನಾಥ ಶೆಟ್ಟಿ ಅಧಿಕಾರ ಸ್ವೀಕರಿಸಿದರು. ಬಳಿಕ ನ್ಯಾ. ಬಿ ಎಸ್ ಪಾಟೀಲ್   ಅವರು 13 ಜೂನ್ 2022 ರಿಂದ ಪ್ರಸ್ತುತ ಅಧಿಕಾರದಲ್ಲಿದ್ದಾಲೋಕಾಯುಕ್ತರ ಅಧಿಲಂಚ, ಅಧಿಕಾರ ದುರುಪಯೋಗ, ಸ್ವಜನಪಕ್ಷಪಾತ ಸೇರಿದಂತೆ ಭ್ರಷ್ಟಾಚಾರ ಮತ್ತು ದುರಾಡಳಿತದ ದೂರುಗಳ ತನಿಖೆ ನಡೆಸುವ ಅಧಿಕಾರ ಲೋಕಾಯುಕ್ತಕ್ಕೆ ಇದೆ. ಇದು ಅನಿರೀಕ್ಷಿತ ದಾಳಿಗಳು, ಹುಡುಕಾಟ ಮತ್ತು ವಶಪಡಿಸಿಕೊಳ್ಳುವ ಕಾರ್ಯಾಚರಣೆಗಳನ್ನು ನಡೆಸಬಹುದು ಮತ್ತು ಭ್ರಷ್ಟಾಚಾರದ ಕೇಸ್‌ಗಳಲ್ಲಿ  ತಪ್ಪಿತಸ್ಥರ ವಿರುದ್ಧ ಕ್ರಮವನ್ನು ಶಿಫಾರಸು ಮಾಡಬಹುದು. ಲೋಕಾಯುಕ್ತರು ಪ್ರಾಸಿಕ್ಯೂಷನ್‌ಗೆ ಶಿಫಾರಸುಗಳನ್ನು ಮಾಡುವ ಅಧಿಕಾರವನ್ನು ಹೊಂದಿದ್ದಾರೆ ಮತ್ತು ಭ್ರಷ್ಟಾಚಾರ ಅಥವಾ ದುರಾಡಳಿತದ ತಪ್ಪಿತಸ್ಥರ ವಿರುದ್ಧ ಶಿಸ್ತು ಕ್ರಮಕ್ಕಾಗಿ ಶಿಫಾರಸುಗಳನ್ನು ಮಾಡಬಹುದು. ಅಗತ್ಯವಿದ್ದರೆ ಪ್ರಕರಣಗಳನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಉಲ್ಲೇಖಿಸುವ ಅಧಿಕಾರವನ್ನು ಹೊಂದಿಲೋಕಾಯುಕ್ತ ಕಾರ್ಯವ್ಯಾಕರ್ನಾಟಕದಲ್ಲಿ ಲೋಕಾಯುಕ್ತವು ಭ್ರಷ್ಟಾಚಾರ ವಿರೋಧಿ ಒಂಬುಡ್ಸ್‌ಮನ್ ಸಂಸ್ಥೆಯಾಗಿದ್ದು, ರಾಜ್ಯದಲ್ಲಿ ಸಾರ್ವಜನಿಕ ಅಧಿಕಾರಿಗಳು ಮತ್ತು ಚುನಾಯಿತ ಪ್ರತಿನಿಧಿಗಳ ವಿರುದ್ಧ ಭ್ರಷ್ಟಾಚಾರ ಮತ್ತು ದುರಾಡಳಿತದ ಆರೋಪಗಳನ್ನು ತನಿಖೆ ಮಾಡಲು ಅಧಿಕಾರವನ್ನು ಹೊಂದಿದೆ. ಲೋಕಾಯುಕ್ತವು ಸ್ವತಂತ್ರ ಸಂಸ್ಥೆಯಾಗಿದ್ದು ಅದು ನೇರವಾಗಿ ರಾಜ್ಯ ಶಾಸಕಾಂಗಕ್ಕೆ ವರದಿ ಮಾಡುತ್ತದೆ ಮತ್ತು ಯಾವುದೇ ಕಾರ್ಯಕಾರಿ ಪ್ರಾಧಿಕಾರದ ನಿಯಂತ್ರಣಕ್ಕೆ ಒಳಪಡುವುದಿಲ್ಲಜನಪ್ರತಿನಿಧಿಗಳು, ಅಧಿಕಾರಿಗಳ ವಿರುದ್ಧ ಮುಖ್ಯಮಂತ್ರಿ, ಸಚಿವರು, ಶಾಸಕರು, ಇತರ ಅಧಿಕಾರಿಗಳು ಸೇರಿದಂತೆ ಯಾವುದೇ ಸಾರ್ವಜನಿಕ ನೌಕರನ ವಿರುದ್ಧದ ದೂರುಗಳನ್ನು ತನಿಖೆ ಮಾಡುವ ಅಧಿಕಾರ ಲೋಕಾಯುಕ್ತಕ್ಕೆ ಇದೆ. ಸಾಕ್ಷಿಗಳನ್ನು ಕರೆಸಿಕೊಳ್ಳುವ, ದಾಖಲೆಗಳನ್ನು ಕೋರುವ ಮತ್ತು ಅದರ ತನಿಖೆಗಳನ್ನು ಕೈಗೊಳ್ಳಲು ಅಗತ್ಯವಿದ್ದರೆ ಶೋಧನೆ ಮತ್ತು ವಶಪಡಿಸಿಕೊಳ್ಳುವ ಅಧಿಕಾರವನ್ನು ಹೊಂದಿದೆ. ಆಡಳಿತಾತ್ಮಕ ಪ್ರಕ್ರಿಯೆಗಳನ್ನು ಸುಧಾರಿಸಲು ಮತ್ತು ಭ್ರಷ್ಟಾಚಾರವನ್ನು ತಡೆಗಟ್ಟಲು ಲೋಕಾಯುಕ್ತರು ಸರ್ಕಾರಕ್ಕೆ ಶಿಫಾರಸುಗಳನ್ನು ಮಾಡಬಹುದು. ಭ್ರಷ್ಟಾಚಾರ ಮತ್ತು ದುರಾಡಳಿತವನ್ನು ತಡೆಗಟ್ಟಲು ಕಾನೂನು ಮತ್ತು ನಿಬಂಧನೆಗಳಿಗೆ ಬದಲಾವಣೆಗಳಿಗೆ ಸಲಹೆಗಳನ್ನು ನೀಡುವ ಅಧಿಕಾರವನ್ನು ಹೊಂದಿ ಐದು ವರ್ಷಗಳ ಅವಧಿಗೆ ನೇಮಕರ್ನಾಟಕದಲ್ಲಿ ಲೋಕಾಯುಕ್ತವನ್ನು ಐದು ವರ್ಷಗಳ ಅವಧಿಗೆ ನೇಮಿಸಲಾಗಿದೆ ಮತ್ತು ಎರಡನೇ ಅವಧಿಗೆ ಮರುನೇಮಕ ಮಾಡಬಹುದು ಎಂಬುದು ಗಮನಿಸಬೇಕಾದ ಅಂಶವಾಗಿದೆ. ಮುಖ್ಯಮಂತ್ರಿ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಮತ್ತು ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳನ್ನು ಒಳಗೊಂಡ ಸಮಿತಿಯ ಶಿಫಾರಸಿನ ಮೇರೆಗೆ ಲೋಕಾಯುಕ್ತರನ್ನು ಕರ್ನಾಟಕ ರಾಜ್ಯಪಾಲರು ನೇಮಿಸುತ್ತಾಲೋಕಾಯುಕ್ತ ಬೆಳಕಿಗೆ ತಂದ ಪ್ರಕರಣಗಣಿ ಹಗರಾಜ್ಯದಲ್ಲಿ ನಡೆದಿರುವ ಅಕ್ರಮ ಗಣಿಗಾರಿಕೆ ಕುರಿತು ಕರ್ನಾಟಕ ಲೋಕಾಯುಕ್ತ ತನಿಖೆ ನಡೆಸಿದ್ದು, ಇದರಿಂದ ಮುಖ್ಯಮಂತ್ರಿಯಾಗಿದ್ದ ಬಿ.ಎಸ್. ಯಡಿಯೂರಪ್ಪ 2011ರಲ್ಲಿ ಅಧಿಕಾರ ಕಳೆದುಕೊಂಡಭೂ ಹಗಮಾಜಿ ಸಚಿವ ಹಾಗೂ ಹಲವು ಸರ್ಕಾರಿ ಅಧಿಕಾರಿಗಳು ಭಾಗಿಯಾಗಿದ್ದ ಭೂ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ತನಿಖೆ ನಡೆಸಿದ್ದು, ಸಚಿವರ ರಾಜೀನಾಮೆ ಹಾಗೂ ಕೆಲ ಅಧಿಕಾರಿಗಳ ಬಂಧನಕ್ಕೆ ಕಾರಣವಾಗಿತ್ತುವಸತಿ ಸರ್ಕಾರಿ ಅಧಿಕಾರಿಗಳು ಮತ್ತು ರಾಜಕಾರಣಿಗಳನ್ನು ಒಳಗೊಂಡಿರುವ ವಸತಿ ಹಗರಣವನ್ನು ಲೋಕಾಯುಕ್ತ ತನಿಖೆ ನಡೆಸಿತು, ಇದು ಹಲವಾರು ಅಧಿಕಾರಿಗಳು ಮತ್ತು ರಾಜಕಾರಣಿಗಳ ಬಂಧನಕ್ಕೆ ಕಾರಣವಾಯಿಲೋಕಾಯುಕ್ತರ ವಿರುದ್ಧ ಲಂಚ ಪ್ರಕ2015ರಲ್ಲಿ ಅಂದಿನ ಲೋಕಾಯುಕ್ತ ನ್ಯಾಯಮೂರ್ತಿ ವೈ.ಭಾಸ್ಕರ್ ರಾವ್ ವಿರುದ್ಧ ಅಧಿಕಾರಿಗಳಿಗೆ ಅನುಕೂಲಕರ ಹುದ್ದೆ ನೀಡಲು ಲಂಚ ಪಡೆದ ಆರೋಪದ ಮೇಲೆ ಲಂಚ ಪ್ರಕರಣ ದಾಖಲಾಗಿತ್ತು. ಈ ಪ್ರಕರಣವು ನ್ಯಾಯಮೂರ್ತಿ ಭಾಸ್ಕರ್ ರಾವ್ ರಾಜೀನಾಮೆಗೆ ಕಾರಣವಾಯಿಅಕ್ರಮವಾಗಿ ಜಮೀನು ಡಿನೋಟಿಫಿಕೇಷಸರ್ಕಾರಿ ಅಧಿಕಾರಿಗಳ ಅಕ್ರಮ ಡಿನೋಟಿಫಿಕೇಷನ್ ಕುರಿತು ಲೋಕಾಯುಕ್ತ ತನಿಖೆ ನಡೆಸಿದ್ದು, ಹಲವು ಅಧಿಕಾರಿಗಳು ಹಾಗೂ ರಾಜಕಾರಣಿಗಳ ಬಂಧನಕ್ಕೆ ಕಾರಣವಾಗಿತ್ತುಬಾಕಿ ಇರುವ ಪ್ರಕರಣಲೋಕಾಯುಕ್ತ ಸಂಸ್ಥೆಯಲ್ಲಿ 8,036 ದೂರುಗಳು ಬಾಕಿ ಇವೆ ಎನ್ನಲಾಗಿದೆ. ಈ ಪೈಕಿ 2,430 ವಿಚಾರಣಾ ಹಂತದಲ್ಲಿ ಇವೆ. 5 ವರ್ಷಗಳಲ್ಲಿ 20,549 ದೂರು ಹಾಗೂ 2,431 ವಿಚಾರಣಾ ಪ್ರಕರಣಗಳು ದಾಖಲಾಗಿವೆ. ಅದರಲ್ಲಿ 13 ಸಾವಿರ ಗಂಭೀರವಲ್ಲದ ಕೇಸ್ ದಾಖಲಾಗಿದ್ದು, ಈ ಪೈಕಿ 12 ಸಾವಿರ ಕೇಸ್ ಇತ್ಯರ್ಥವಾಗಿವೆ. 2017ರ ಜ. 28ರಿಂದ ಇದುವರೆಗೆ ಲೋಕಾಯುಕ್ತ ಸಂಸ್ಥೆಯಲ್ಲಿ ಒಟ್ಟು 20,199 ದೂರು ಹಾಗೂ 2,677 ವಿಚಾರಣಾ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ಈ ಅವಧಿಯಲ್ಲಿ 2,122 ಪ್ರಕರಣಗಳಲ್ಲಿ ಲೋಕಾಯುಕ್ತ ಕಾಯ್ದೆ ಕಾಲಂ 12(3)ರ ಅನ್ವಯ ಹಾಗೂ 587 ಕೇಸ್‌ಗಳಲ್ಲಿ ಕಲಂ 12(1)ರ ಅನ್ವಯ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗಿದೆ. ಕಳೆದ 5 ವರ್ಷಗಳಲ್ಲಿ 304 ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ಸಾರ್ವಜನಿಕರ ಕುಂದುಕೊರತೆಗಳ ನಿವಾರಣೆಗೆ ಲೋಕಾಯುಕ್ತರು ಪ್ರಯತ್ನಿಸಿದ್ದಾರೆ. ಗಳು.ನ್:ತು.ರಣ:ತು.ಹಗರಣ:.ರಣ:ರು.ರಣ:ಗಳುರೆ.ಕದೆ.ತನಿಖೆ.ಪ್ತಿದೆ.ಕಾರರೆ.ರುರೆ.ಗೆ?ಬಲ?ದು.ಪಡಿ.ಕ್ತ.ರೆ?ದು.? …ಪ್ರೇರಿತ ದೂರು ದಾಖಲಿಸಿಕೊಂಡು ಸಾರ್ವಜನಿಕರ ಕುಂದುಕೊರತೆಗಳ ನಿವಾರಣೆಗೆ ಲೋಕಾಯುಕ್ತರು ಪ್ರಯತ್ನಿಸಿದ್ದಾರೆ.

Post a Comment

Previous Post Next Post