ಹಂಗಾಮಿ ಸಿಎಂ ಬಸವರಾಜ್ ಬೊಮ್ಮಾಯಿ
ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಸೋಲಿಗೆ ಕಾರಣವನ್ನು ವಿಶ್ಲೇಷಣೆ ಮಾಡಿರುವ ಆರ್ಎಸ್ಎಸ್ ನಾಯಕರು ಪಕ್ಷ ಸಂಘಟನೆ ಬೊಮ್ಮಾಯಿ ಅವರಿಗೆ ಹಲವು ಸಲಹೆಗಳನ್ನು ನೀಡಿದ್ದಾರೆ. ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ (Karnataka Assembly Election) ಆಡಳಿತರೂಢ ಬಿಜೆಪಿ (BJP) ಪಕ್ಷ ಹೀನಾಯ ಸೋಲುಂಡಿದೆ. ಇದರ ಬೆನ್ನಲ್ಲೇ ರಾಜ್ಯಪಾಲರನ್ನು (Governor) ಭೇಟಿ ಮಾಡಿದ್ದ ಬಸವರಾಜ ಬೊಮ್ಮಾಯಿ (Basavaraj Bommai) ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ (Resignation) ಸಲ್ಲಿಕೆ ಮಾಡಿದ್ದರು. ಈ ನಡುವೆ ನಿನ್ನೆ ಬಿಜೆಪಿ ಕಚೇರಿಗೆ ಭೇಟಿ ನೀಡಿದ್ದ ಹಲವು ಬಿಜೆಪಿ ನಾಯಕರು ತಮ್ಮ ಸೋಲಿಗೆ ಕಾರಣಗಳನ್ನು ನೀಡಿದ್ದರು. ಈ ಎಲ್ಲಾ ಬೆಳವಣಿಗಗಳ ನಡುವೆ ಇಂದು ಆರ್ಎಸ್ಎಸ್ (RSS) ನಾಯಕರು ಹಂಗಾಮಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಬುಲಾವ್ ನೀಡಿದ್ದು, ರಹಸ್ಯ ಸಭೆಯನ್ನು ನಡೆಸಿದ್ದಾರೆ. ಸಭೆಯಲ್ಲಿ ಚುನಾವಣೆ ಸೋಲಿನ ಕುರಿತಂತೆ ಚರ್ಚೆ ನಡೆಸಿ, ಪಕ್ಷದಲ್ಲಿ ಮೇಜರ್ ಸರ್ಜರಿ ಮಾಡುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.ಬಿಜೆಪಿ ಶಾಸಕಾಂಗ ಸಭೆ ಇಂದು ಘೋಷಣೆ ಸಾಧ್ಯತೆ

Post a Comment