Karnataka BJP: ನಿಮ್ಮ ವಿರುದ್ಧ ಯಾಕೆ ಕ್ರಮ ಕೈಗೊಳ್ಳಬಾರದು? ರೇಣುಕಾಚಾರ್ಯ, ಯತ್ನಾಳ್​​ಗೆ ಶಿಸ್ತು ಸಮಿತಿ ನೋಟಿಸ್​​


 ಮಾಜಿ ಸಚಿವ ರೇಣುಕಾಚಾರ್ಯ ಅವರು, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಿರುದ್ಧ ಬಹಿರಂಗವಾಗಿ ವಾಗ್ದಾಳಿ ನಡೆಸಿ ರಾಜೀನಾಮೆಗೆ ಆಗ್ರಹಿಸಿದ್ದರು.ಬೆಂಗಳೂರು: ಪಕ್ಷದ ವಿರುದ್ಧ ಬಹಿರಂಗ ಹೇಳಿಕೆ ನೀಡುವ ಮೂಲಕ ಭಾರೀ ಚರ್ಚೆಗೆ ಕಾರಣವಾಗಿದ್ದ ಮಾಜಿ ಸಚಿವರಾದ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal)​ ಹಾಗೂ ಎಂಪಿ ರೇಣುಕಾಚಾರ್ಯ (MP Renukacharya) ಅವರಿಗೆ ಬಿಜೆಪಿ (BJP) ಶಿಸ್ತು ಸಮಿತಿ ಅಧ್ಯಕ್ಷರು ನೋಟಿಸ್ ಜಾರಿ ಮಾಡಿದ್ದಾರೆ. ನೋಟಿಸ್​ನಲ್ಲಿ ನಿಮ್ಮ ವಿರುದ್ಧ ಯಾಕೆ ಕ್ರಮಕೈಗೊಳ್ಳಬಾರದು ಎಂದು ಕಾರಣ ಕೊಡುವಂತೆ ಸೂಚನೆ ನೀಡಿದ್ದು, ನೋಟಿಸ್​ಗೆ ಉತ್ತರಿಸಲು ಒಂದು ವಾರಗಳ ಕಾಲ ಸಮಯವನ್ನು ನೀಡಿದ್ದಾರೆ. ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ್ ಪಾಟೀಲ್ (Lingaraj Patil ) ನೋಟಿಸ್ ಜಾರಿ ಮಾಡಿದ್ದು, ಇದೇ ವೇಳೆ ನಾಳೆ ಪಕ್ಷದ ಕಚೇರಿಗೂ ಬರುವಂತೆಯೂ ಸೂಚಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.ಮಾಜಿ ಸಚಿವ ರೇಣುಕಾಚಾರ್ಯ ಅವರು, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಿರುದ್ಧ ಬಹಿರಂಗವಾಗಿ ವಾಗ್ದಾಳಿ ನಡೆಸಿ ರಾಜೀನಾಮೆಗೆ ಆಗ್ರಹಿಸಿದ್ದರು. ಇತ್ತ ಮಾಜಿ ಸಿಎಂ ಬೊಮ್ಮಾಯಿ ವಿರುದ್ಧ ಹೊಂದಾಣಿಕೆ ಆರೋಪ ಮಾಡಿದ್ದ ಬಸನಗೌಡ ಪಾಟೀಲ್ ಯತ್ನಾಳ್, ಬಹಿರಂಗವಾಗಿ ಪಕ್ಷದ ಸಭೆಯಲ್ಲೇ ವಾಗ್ದಾಳಿ ನಡೆಸಿದ್ದರು.

Post a Comment

Previous Post Next Post