Government Of Karnataka: ಹುತಾತ್ಮ ಯೋಧ ಪ್ರಾಂಜಲ್ ಕುಟುಂಬಕ್ಕೆ 50 ಲಕ್ಷ ಪರಿಹಾರ; ಸಿಎಂ ಆದೇಶ


 ಕ್ಯಾಪ್ಟನ್ ಪ್ರಾಂಜಲ್Captain Pranjal: ದೇಶ ರಕ್ಷಣೆಗಾಗಿ ಪ್ರಾಣ ಪಣಕ್ಕಿಟ್ಟು ಶ್ರಮಿಸುವ ಪ್ರತಿಯೊಬ್ಬ ಯೋಧನ (Soldiers) ಬಗ್ಗೆ ನಮಗೆ ಅಪಾರ ಗೌರವವಿದೆ ಬೆಂಗಳೂರು:ಜಮ್ಮು - ಕಾಶ್ಮೀರದ ರಜೌರಿಯಲ್ಲಿ (Rajouri) ಉಗ್ರರೊಂದಿಗಿನ ಕಾಳಗದ ವೇಳೆ ಹುತಾತ್ಮರಾದ ನಾಡಿನ ಹೆಮ್ಮೆಯ ಯೋಧ ಕ್ಯಾಪ್ಟನ್ ಪ್ರಾಂಜಲ್ (Captain Pranjal) ಅವರ ಕುಟುಂಬಕ್ಕೆ ರೂ. 50,00,000 ( ಐವತ್ತು ಲಕ್ಷ ) ಪರಿಹಾರಧನವನ್ನು ನಮ್ಮ ಸರ್ಕಾರದಿಂದ(Karnataka Government) ಮಂಜೂರು ಮಾಡಿ ಆದೇಶ ಹೊರಡಿಸಲಾಗಿದೆ. ದೇಶ ರಕ್ಷಣೆಗಾಗಿ ಪ್ರಾಣ ಪಣಕ್ಕಿಟ್ಟು ಶ್ರಮಿಸುವ ಪ್ರತಿಯೊಬ್ಬ ಯೋಧನ (Soldiers) ಬಗ್ಗೆ ನಮಗೆ ಅಪಾರ ಗೌರವವಿದೆ. ಹುತಾತ್ಮ ಯೋಧ ಪ್ರಾಂಜಲ್ ಅವರ ತ್ಯಾಗ, ಬಲಿದಾನಕ್ಕೆ ಬೆಲೆಕಟ್ಟಲಾಗದು, ಆದರೆ ದೇಶದ ಕೋಟ್ಯಂತರ ಜನರ ಪರವಾಗಿ ಈ ಹೊತ್ತಿನಲ್ಲಿ ಅವರ ಕುಟುಂಬದ ಜೊತೆ ನಿಲ್ಲಬೇಕಾದುದ್ದು ನಮ್ಮ ಕರ್ತವ್ಯವೆಂದು ಭಾವಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಹೇಳಿದ್ದಾರೆ.ಪರಿಹಾರಧನದ ಚೆಕ್ ಅನ್ನು ಸಿದ್ಧಪಡಿಸಲಾಗಿದ್ದು ಇಂದು ಮೃತ ಯೋಧನ ಕುಟುಂಬಕ್ಕೆ ಹಸ್ತಾಂತರಿಸಲಾಗುವುದು. ಮತ್ತೊಮ್ಮೆ ಕ್ಯಾಪ್ಟನ್ ಪ್ರಾಂಜಲ್ ಅವರ ಅನನ್ಯ ದೇಶಸೇವೆ, ಸಮರ್ಪಣಾಭಾವವನ್ನು ಗೌರವದಿಂದ ಸ್ಮರಿಸುತ್ತಾ, ಗೌರವ ನಮನ ಸಲ್ಲಿಸುತ್ತೇನೆ ಎಂದು ಸೋಶಿಯಲ್ ಮೀಡಿಯಾ ಎಕ್ಸ್ ಖಾತೆಯಲ್ಲಿ ಸಿಎಂ ಬರೆದುಕೊಂಡಿದ್ದಾರೆ.ಸಂಬಂಧಿತ ಸುದ್ದಿತೆಲಂಗಾಣದ ಪತ್ರಿಕೆಗಳಲ್ಲಿ 'ಉಚಿತ ಭಾಗ್ಯ'ಗಳ ಪ್ರಚಾರ, ಕರ್ನಾಟಕ ಸರ್ಕಾರಕ್ಕೆ ನೋಟಿಸ್!ಹುತಾತ್ಮ ಯೋಧ ಪ್ರಾಂಜಲ್ ಅಂತಿಮ ಯಾತ್ರೆಯಲ್ಲಿ ಹರಿದ ಕಣ್ಣೀರು! ರಸ್ತೆಯುದ್ದಕ್ಕೂ ಸ್ಮಶಾನ ಮೌನ!Rajneesh Goel: ರಾಜ್ಯ ಸರ್ಕಾರದ ನೂತನ ಮುಖ್ಯಕಾರ್ಯದರ್ಶಿಯಾಗಿ ರಜನೀಶ್ ಗೋಯೆಲ್‌ ನೇಮಕಇವ್ರನ್ನೆಲ್ಲ ಕೇಳಿ ವರ್ಗಾವಣೆ ಮಾಡಬೇಕಿಲ್ಲ- ಯತೀಂದ್ರ ಸಿದ್ದರಾಮಯ್ಯ ಪರ ಸಚಿವ ಚೆಲುವರಾಯಸ್ವಾಮಿ ಬ್ಯಾಟಿಂಗ್ಬಿಜೆಪಿ ಕಾರ್ಯಕರ್ತನಿಗೆ ಚಾಕು ಇರಿತಬೆಳಗಾವಿಯಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ಚಾಕು ಇರಿತವಾಗಿದೆ. ಜಯನಗರದ ತಮ್ಮ ನಿವಾಸದ ಬಳಿಯೇ ಎಸ್ಸಿ ಮೋರ್ಚಾ ಬಿಜೆಪಿ ಕಾರ್ಯಕರ್ತ ಪೃಥ್ವಿ ಸಿಂಗ್ ಮೇಲೆ ಚಾಕು ಇರಿತವಾಗಿದೆ. ಪೃಥ್ವಿ ಸಿಂಗ್ ಕೈ ಹಾಗೂ ಬೆನ್ನಿನ ಭಾಗದಲ್ಲಿ ತೀವ್ರ ಗಾಯವಾಗಿದ್ದು, ಕೆಎಲ್‌ಇ ಆಸ್ಪತ್ರೆಗೆ ದಾಖಲಿಸಲಾಗಿದೆ.ಪೃಥ್ವಿ ಸಿಂಗ್‌ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಆಪ್ತನಾಗಿದ್ದು, ನನ್ನ ಮೇಲೆ ಎಂಎಲ್‌ಸಿ ಚನ್ನರಾಜ್ ಹಟ್ಟಿಹೊಳಿ ಆಪ್ತರಾದ ಸದ್ದಾಂ, ಸುಜಯ್ ಜಾಧವ್ ಎಂಬುವರು ಹಲ್ಲೆ ಮಾಡಿದ್ದಾರೆ ಅಂತ ವಿಡಿಯೋ ಮಾಡಿ ಆರೋಪ ಮಾಡಿದ್ದಾರೆ. ಘಟನೆಗೂ ಮುನ್ನ ಚನ್ನರಾಜ್ ಆಪ್ತರು ಪೃಥ್ವಿ ಸಿಂಗ್ ಜೊತೆಗೆ ಮಾತನಾಡುತ್ತಿರೋ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ.ಇನ್ನು ಘಟನೆ ಬಳಿಕ ಕೆಎಲ್‌ಇ ಆಸ್ಪತ್ರೆಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಎಂಎಲ್‌ಸಿ ಚಲವಾದಿ ನಾರಾಯಣಸ್ವಾಮಿ, ಕೇಶವ ಪ್ರಸಾದ್ ಭೇಟಿ ನೀಡಿ ಪೃಥ್ವಿ ಸಿಂಗ್ ಆರೋಗ್ಯ ವಿಚಾರಿಸಿದ್ರು. ಅಲ್ಲದೆ ಪ್ರಕರಣ ಸಮಗ್ರ ತನಿಖೆಗೆ ಆಗ್ರಹಿಸಿದ್ರು.ಇದನ್ನೂ ಓದಿ: Bhavani Revanna: ಭವಾನಿ ಯಾರಿಗೂ ನೋವು ಮಾಡಿಲ್ಲ, ನೋವಾಗಿದ್ದರೆ ಕ್ಷಮೆ ಕೇಳುವೆ! ಪತ್ನಿ ಪರ ಎಚ್‌ಡಿ ರೇವಣ್ಣ ಸಮಜಾಯಿಷಿಯಾರಾದ್ರೂ ಕೊಲೆ ಮಾಡಿ ಬಿಸಾಕಿದ್ರಾ?ಮೂರು ದಿನಗಳ ಹಿಂದೆ ಮನೆಯಿಂದ ನಾಪತ್ತೆ ಆಗಿದ್ದ ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಅವರ ಬಾವ ಮಹದೇವಯ್ಯ ಶವವಾಗಿ ಪತ್ತೆ ಆಗಿದ್ದಾರೆ. ಚಾಮರಾಜನಗರದ ಕಾಡಂಚಿನ ತಮಿಳುನಾಡು ರಸ್ತೆಯಲ್ಲಿ ಮಹದೇವಯ್ಯ ಶವ ಸಿಕ್ಕಿದೆ. ಬೆಳಗ್ಗೆ ಚಾಮರಾಜನಗರದ ಹನೂರಿನ ರಾಮಪುರ ಬಳಿ ಕಾರ್ ಪತ್ತೆ ಆಗಿತ್ತು. ಕಾರಿನ ಡಿಕ್ಕಿಯಲ್ಲಿ ರಕ್ತದ ಕಲೆಗಳು ಕಂಡುಬಂದಿದ್ದವು.. ರಕ್ತದ ಜಾಡು ಹಿಡಿದು ರಾಮಾಪುರ ಅರಣ್ಯವಲಯದಲ್ಲಿ ಪೊಲೀಸರು ಶೋಧ ನಡೆಸಿ ಮಹದೇವಯ್ಯರ ಶವ ಪತ್ತೆ ಹಚ್ಚಿದ್ದಾರೆ.

Post a Comment

Previous Post Next Post