ಗಳೂರು, ಮೇ 2: ಸುಹಾಸ್ ಶೆಟ್ಟಿ ಹತ್ಯೆಯನ್ನು ಬಿಜೆಪಿಯವರು ರಾಜಕೀಯಕ್ಕೆ ಬಳಸಿಕೊಳ್ಳಬಾರದು. ಕರ್ನಾಟಕ ರಾಜ್ಯ ಶಾಂತಿಯಿಂದಿದೆ. ಶಾಂತಿಯಿಂದ ಇರುವುದಕ್ಕೆ ಬಿಜೆಪಿಯವರು ಸಹಕಾರ ನೀಡಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.
ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದ ಅವರರು, ಮಂಗಳೂರಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಬಗ್ಗೆ ಕೇಳಿದಾಗ, "ಹತ್ಯೆಯಲ್ಲಿ ಭಾಗಿಯಾಗಿರುವ ತಪ್ಪಿತಸ್ಥರ ವಿರುದ್ಧ ಪೊಲೀಸರು ಕಾನೂನು ಕ್ರಮ ತೆಗೆದುಕೊಳ್ಳುತ್ತಾರೆ.
ಈ ವಿಚಾರದಲ್ಲಿ ನಾವು ತಲೆಹಾಕಲು ಹೋಗುವುದಿಲ್ಲ ಎಂದು ಡಿ ಕೆ ಶಿವಕುಮಾರ್ ತಿಳಿಸಿದರು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ ಎನ್ನುವ ಬಿಜೆಪಿ ಆರೋಪದ ಬಗ್ಗ ಮಾತನಾಡಿ, ಇದರ ಬಗ್ಗೆ ನಾನು ಪ್ರತಿಕ್ರಿಯೆ ನೀಡಲು ಹೋಗುವುದಿಲ್ಲ. ಮಂಗಳೂರಿನ ಪೊಲೀಸರು ಉತ್ತಮ ಸಾಮರ್ಥ್ಯ ಹೊಂದಿದ್ದಾರೆ. ಈ ಘಟನೆ ಬಗ್ಗೆ ಕಾನೂನು ಕ್ರಮ ತೆಗೆದುಕೊಳ್ಳುತ್ತಾರೆ ಎಂದರು.
ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಭಾರತೀಯ ಚಲನಚಿತ್ರ ಅಕಾಡೆಮಿ (IIFA) ವತಿಯಿಂದ ಉತ್ಸವ ಹಾಗೂ ಅಂತಾರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ನಡೆಸುವ ಸಂಬಂಧ IIFA ಪ್ರತಿನಿಧಿಗಳ ಜತೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಭೆ ನಡೆಸಿದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿ, ಈ ವರ್ಷ ಡಿಸೆಂಬರ್ ಅಥವಾ ಮುಂದಿನ ವರ್ಷ ಜನವರಿಯಲ್ಲಿ ಬೆಂಗಳೂರು ಹಬ್ಬ, ಐಫಾ ಪ್ರಶಸ್ತಿ ಸಮಾರಂಭ ನಡೆಸಲಾಗುವುದು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಡಿಸೆಂಬರ್ ಅಥವಾ ಜನವರಿಯಲ್ಲಿ ಬೆಂಗಳೂರು ಹಬ್ಬ ಹಾಗೂ ಐಫಾ ಪ್ರಶಸ್ತಿ ವಿತರಣೆ ಸಮಾರಂಭ ಚರ್ಚೆ ನಡೆಸಲಾಗಿದೆ. ಈ ಬಗ್ಗೆ ಐಫಾದವರ ಜತೆ ಚರ್ಚೆ ನಡೆಸಲಾಯಿತು. ಒಂದಷ್ಟು ಕಾರ್ಯಕ್ರಮಗಳನ್ನು ಸಂಯೋಜಿಸಿ ಬೆಂಗಳೂರಿನಲ್ಲಿ ಒಂದು ವಾರಗಳ ಕಾಲ ಉತ್ತಮ ವಾತಾವರಣ ಸೃಷ್ಟಿ ಮಾಡುವುದು ನಮ್ಮ ಆಧ್ಯತೆ. ಜೊತೆಗೆ ಬೆಂಗಳೂರಿನ ಬಗ್ಗೆ ಮಹತ್ವ ನೀಡಬೇಕು ಎನ್ನುವುದು ನಮ್ಮ ಆಲೋಚನೆ ಎಂದರು.
ಈ ಹಿಂದೆ ರಾಜಸ್ಥಾನದಲ್ಲಿ ನಡೆದಿತ್ತು. ತೆಲಂಗಾಣದಲ್ಲಿ ಸೌಂದರ್ಯ ಸ್ಪರ್ಧೆ ಮಾಡುತ್ತಿದ್ದಾರೆ. ನಾವು ಇದನ್ನು ಮಾಡಲು ಹೋಗುವುದಿಲ್ಲ. ಇತ್ತೀಚಿನ ದಿನಗಳಲ್ಲಿ ಬಾಲಿವುಡ್ ಗಿಂತ ನಮ್ಮ ಸ್ಯಾಂಡಲ್ ವುಡ್ ಎತ್ತರಕ್ಕೆ ಹೋಗಿದೆ. ಇದಕ್ಕೆ ಉತ್ತೇಜನ ಕೊಡಬೇಕು ಎಂಬುದು ನಮ್ಮ ಉದ್ದೇಶ. ಅಕ್ಟೋಬರ್ ನಲ್ಲಿ ದಸರಾವಿರುವ ಕಾರಣಕ್ಕೆ ಡಿಸೆಂಬರ್, ಜನವರಿಯಲ್ಲಿ ನಡೆಸಬಹುದು ಎಂದು ತಿಳಿಸಲಾಗಿದೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ನಮ್ಮ ಸಂಸ್ಕೃತಿಯನ್ನು ಪರಿಚಯಿಸಲು ಅವಕಾಶ ಸಿಗಲಿದೆ. ಮುಂಬೈ ಬಿಟ್ಟರೆ ಬೆಂಗಳೂರು ಈ ರೀತಿಯ ಕಾರ್ಯಕ್ರಮಗಳಿಗೆ ಸೂಕ್ತ ಎಂದು ಆಯೋಜಕರು ತಿಳಿಸಿದ್ದಾರೆ ಎಂದು ಹೇಳಿದರು.

Post a Comment