ರಿಯ ಐಪಿಎಸ್ ಅಧಿಕಾರಿ ಬಿ. ದಯಾನಂದ್ ಅವರು ರಾಷ್ಟ್ರಪತಿಗಳ ಪೊಲೀಸ್ ವಿಶಿಷ್ಟ ಸೇವಾ ಪದಕಕ್ಕೆ ಭಾಜನರಾಗಿದ್ದಾರೆ. ೨೦೨೨ರ ಗಣರಾಜ್ಯೋತ್ಸವ ಮತ್ತು ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಈ ಪ್ರಶಸ್ತಿಯನ್ನು ಘೋಷಿಸಲಾಗಿತ್ತು.
ಇದೇ ರೀತಿ, ಈಗಿನ ನಗರ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್ ಅವರು ಕೂಡ ೨೦೨೩ನೇ ಸಾಲಿನ ಪೊಲೀಸ್ ವಿಶಿಷ್ಟ ಸೇವಾ ಪದಕಕ್ಕೆ ಆಯ್ಕೆಯಾಗಿದ್ದಾರೆ.
ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಆರ್ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ ಕರ್ತವ್ಯಲೋಪದ ಆರೋಪದ ಮೇರೆಗೆ ಬಿ. ದಯಾನಂದ್ ಅವರನ್ನು ಅಮಾನತುಗೊಳಿಸಲಾಗಿತ್ತು. ನಂತರ, ಅವರ ಸ್ಥಾನಕ್ಕೆ ಸೀಮಂತ್ ಕುಮಾರ್ ಸಿಂಗ್ ಅವರನ್ನು ನಗರ ಪೊಲೀಸ್ ಆಯುಕ್ತರನ್ನಾಗಿ ನೇಮಕ ಮಾಡಲಾಗಿತ್ತು.
Post a Comment